bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Chronicles 26
2 Chronicles 26
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
1
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
4
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
5
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
6
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
8
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
9
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10
ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
11
ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
12
ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
13
ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
14
ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
15
ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
16
ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
17
ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
18
ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
19
ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
20
ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
21
ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
22
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
23
ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36