bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Chronicles 30
2 Chronicles 30
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 31 →
1
ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
2
ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
3
ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
4
ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
5
ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
6
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
7
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
8
ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
9
ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
10
ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
11
ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
13
ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
14
ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
15
ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
16
ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
17
ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
18
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
19
ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
20
ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
21
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
22
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
23
ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
24
ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
25
ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
26
ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
27
ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 31 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36