bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Kings 17
2 Kings 17
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 18 →
1
ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
2
ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
3
ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
4
ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
5
ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
6
ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
7
ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
8
ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
9
ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
10
ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
11
ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
12
“ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
13
ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
14
ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
15
ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
16
ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
17
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
18
ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
19
ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
20
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
21
ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
22
ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
23
ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
24
ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
25
ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
26
ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
27
ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
28
ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
29
ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
30
ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
31
ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
32
ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
33
ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
34
ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
35
ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
36
ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
37
ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
38
ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
39
ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
40
ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
41
ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25