bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Samuel 17
2 Samuel 17
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 18 →
1
ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
2
ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
3
ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
4
ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
5
ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
6
ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
7
ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
8
ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
9
ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
10
ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
11
ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
12
ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
13
ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
14
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
15
ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
16
ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
17
ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
18
ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
19
ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
20
ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
21
ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
22
ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
23
ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
24
ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
25
ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
26
ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
27
ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
28
ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
29
ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24