bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Samuel 2
2 Samuel 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 3 →
1
ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
2
ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
3
ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.
4
ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
5
ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
6
ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
7
ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.
8
ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
9
ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
10
ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
11
ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.
12
ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
13
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
14
ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
15
ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
16
ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.
17
ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.
18
ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
19
ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.
20
ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.
21
ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
22
ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.
23
ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.
24
ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
25
ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.
26
ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
27
ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.
28
ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.
29
ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.
30
ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
31
ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.
32
ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24