bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Samuel 8
2 Samuel 8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 9 →
1
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
4
ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
5
ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6
ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
7
ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8
ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
9
ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10
ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
11
ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
12
ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
13
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
14
ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
15
ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16
ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17
ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24