bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Ezekiel 14
Ezekiel 14
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 15 →
1
ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
2
ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
3
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
4
ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
5
ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
6
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
7
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
8
ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
9
“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
10
ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
11
ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
12
ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
13
“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
14
ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
15
“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
16
ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
17
“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
18
ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
19
“ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
20
ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
21
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
22
ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
23
ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48