bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Hebrews 11
Hebrews 11
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 12 →
1
ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
2
ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.
3
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
4
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
5
ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
7
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
8
ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
9
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
10
ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
11
ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.
12
ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.
13
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
14
ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.
15
ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
16
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
17
ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
19
ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.
20
ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
21
ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
22
ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
23
ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
24
ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
25
ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
26
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
27
ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
28
ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
29
ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
30
ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
31
ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
32
ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
33
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
34
ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
35
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
36
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
37
ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
38
ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
39
ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.
40
ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 12 →
All chapters:
1
2
3
4
5
6
7
8
9
10
11
12
13