bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Jeremiah 2
Jeremiah 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 3 →
1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2
“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
3
ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
4
ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
5
ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
6
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
7
ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
8
ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
9
ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
10
“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
11
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
12
ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
13
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
14
ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
15
ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
16
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
17
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
18
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
19
ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
20
ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
21
“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
22
ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
23
“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
24
ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
25
“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
26
ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
27
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
28
ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
29
ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
30
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
31
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
32
ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
33
ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
34
ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
35
ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
36
ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
37
ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52