bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Jeremiah 26
Jeremiah 26
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 27 →
1
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
3
ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
4
ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
5
ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
6
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
7
ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
8
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
9
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
10
ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
11
ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
12
ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
13
ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
14
ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
15
ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
16
ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
17
ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
18
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
19
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
20
ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
21
ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
22
ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
23
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
24
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52