bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Jeremiah 5
Jeremiah 5
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 6 →
1
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
2
ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
3
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
4
ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
5
ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
6
ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
7
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
8
ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
9
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
10
“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
11
ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
12
ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
13
ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.
14
ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
15
ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
16
ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
17
ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
18
ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.
19
“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
20
ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
21
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
22
ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
23
ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
24
“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
25
ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.
26
ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
27
ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
28
ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
29
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
30
ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;
31
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52