bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
John 12
John 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 13 →
1
ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
2
ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
3
ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
4
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
5
“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
6
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
7
ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
8
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9
ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
10
ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
11
ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12
ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13
ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14
ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15
ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16
ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17
ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18
ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19
ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20
ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21
ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23
ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26
ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27
ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28
ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29
ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30
ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32
ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33
ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34
ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
35
ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36
ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37
ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39
ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40
“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41
ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43
ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44
ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45
ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46
ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47
ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
49
ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
50
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21