bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Judges 2
Judges 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 3 →
1
ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
2
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
3
‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
4
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
5
ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
6
ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
7
ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
8
ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.
9
ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
10
ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
11
ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
12
ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
13
ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.
14
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
15
ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
16
ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
17
ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.
18
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
19
ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
20
ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
21
ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
22
ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
23
ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21