bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Luke 18
Luke 18
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 19 →
1
ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
2
ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
3
ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
4
ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
5
ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
6
ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
7
ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
8
ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
9
ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
10
ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
11
ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
12
ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
13
ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
14
ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
15
ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
16
ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
17
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
18
ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
19
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
20
‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
21
ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
22
ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23
ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
24
ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
25
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
26
ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
27
ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
28
ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
29
ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
30
ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.
31
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
32
ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
33
ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
34
ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
35
ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
36
ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
37
ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
38
ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
39
ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
40
ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
41
ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
42
ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
43
ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24