bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Luke 20
Luke 20
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
1
ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
2
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
3
ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
4
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
5
ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
6
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
7
ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
8
ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
9
ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10
ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11
ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12
ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
13
ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
14
ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
15
ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
16
ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
17
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
18
“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
19
ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
20
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
21
ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22
ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
23
ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
24
ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
25
ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
26
ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
27
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
28
“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
29
ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30
ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
32
ಕಡೆಯಲ್ಲಿ ಆ ಹೆಂಗಸೂ ಸತ್ತಳು.
33
ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
34
ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ.
35
ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.
36
ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
37
ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
38
ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
39
ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
40
ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
41
ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42
“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
44
“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
45
ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
46
“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
47
ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24