bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Proverbs 22
Proverbs 22
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
1
ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
2
ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4
ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5
ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7
ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8
ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9
ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10
ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
11
ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
12
ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
13
“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
14
ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
15
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
16
ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
17
ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
18
ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
19
ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
20
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
21
ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
22
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
23
ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
24
ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
25
ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
26
ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
27
ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
28
ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
29
ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31