bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Revelation 16
Revelation 16
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
1
ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
2
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
3
ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
4
ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
5
ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
6
ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
7
ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
8
ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
9
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
10
ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
11
ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
12
ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
13
ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
14
ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
15
“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
16
ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
17
ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
18
ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
19
ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
20
ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
21
ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22