bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 17
1 Kings 17
Kannada Bible (KNCL) BSI 2016
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 18 →
1
ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.
2
ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
4
ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.
5
ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.
6
ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
7
ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.
8
ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.
10
ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.
11
ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.
12
ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.
13
ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
14
ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.
15
ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.
16
ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.
17
ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.
18
ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.
19
ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.
20
ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,
21
ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು.
22
ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು.
23
ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.
24
ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22