bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 22
1 Samuel 22
Kannada Bible (KNCL) BSI 2016
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
1
ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.
2
ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
3
ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.
4
ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.
5
ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.
6
ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.
7
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?
8
ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.
9
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.
10
ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.
11
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು.
12
ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.
13
ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು.
14
ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?
15
ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.
16
ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.
17
ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.
18
ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.
19
ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.
20
ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.
21
ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.
22
ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!
23
ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31