bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 4
1 Samuel 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 5 →
1
ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
2
ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು.
3
ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.
4
ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
5
ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.
6
ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.
7
“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.
8
ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?
9
ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.
10
ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
11
ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.
12
ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,
13
ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.
14
ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು.
15
ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
16
ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.
17
ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.
18
ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು.
19
ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
20
ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.
21
ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.
22
ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31