bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 26
2 Chronicles 26
Kannada Bible (KNCL) BSI 2016
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
1
ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
2
ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3
ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ.
4
ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.
5
ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.
6
ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7
ಫಿಲಿಷ್ಟಿಯರೊಡನೆ ಗೂರ್ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.
8
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.
9
ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗ, ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10
ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.
11
ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.
12
ರಣವೀರರು ಆಗಿದ್ದ ಎಲ್ಲ ಗೋತ್ರಪ್ರಧಾನರ ಸಂಖ್ಯೆ ಎರಡು ಸಾವಿರದ ಆರುನೂರು.
13
ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.
14
ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.
15
ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.
16
ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.
17
ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು,
18
“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.
19
ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು. ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.
20
ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.
21
ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.
22
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.
23
ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
Recommended Reading
Commentary
2 Chronicles Commentaries
→
Devotional
2 Chronicles Devotional Guide
→
Get This Bible
KNCL Study Bible
→