bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 33
2 Chronicles 33
Kannada Bible (KNCL) BSI 2016
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 34 →
1
ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.
2
ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3
ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
4
ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ
5
ಆರಿಸಿಕೊಂಡ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.
6
ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.
7
ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;
8
ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.
9
ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
10
ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
11
ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.
12
ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.
13
ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.
14
ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.
15
ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು.
16
ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
17
ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
18
ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ.
19
ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.
20
ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.
21
ಆಮೋನನು ಅರಸನಾದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು.
22
ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.
23
ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.
24
ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.
25
ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 34 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36