bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 11
2 Kings 11
Kannada Bible (KNCL) BSI 2016
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 12 →
1
ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.
2
ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.
3
ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.
4
ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.
5
ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;
6
ಇನ್ನೊಂದು ಭಾಗ ಸೂರ್ ಬಾಗಿಲಿನಲ್ಲಿಯೂ ಮತ್ತೊಂದು ಭಾಗ ಕಾವಲುದಂಡಿನ ಹಿಂದಣ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
7
ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.
8
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.
9
ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು.
10
ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.
11
ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.
12
ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.
13
ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.
14
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15
ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.
16
ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.
17
ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು.
18
ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;
19
ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
20
ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.
21
ಹೀಗೆ ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25