bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 2
2 Kings 2
Kannada Bible (KNCL) BSI 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 3 →
1
ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
2
ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.
3
ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.
4
ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.
5
ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.
6
ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.
7
ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.
8
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.
9
ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.
10
ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.
11
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.
12
ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
13
ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು.
14
“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.
15
ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
16
ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.
17
ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
18
ಇನ್ನೂ ಜೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಅವರು ಬಂದರು. ಅವನು, “’ಹೋಗಬೇಡಿ,’ ಎಂದು ನಾನು ಹೇಳಲಿಲ್ಲವೇ?’ ಎಂದನು.
19
ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.
20
ಆಗ ಎಲೀಷನು, “ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿ,” ಎಂದನು. ಅವರು ತಂದುಕೊಟ್ಟರು.
21
ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.
22
ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು. ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಶುದ್ಧವಾಗಿದೆ.
23
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.
24
ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.
25
ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25