bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 20
2 Kings 20
Kannada Bible (KNCL) BSI 2016
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 21 →
1
ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.
2
ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,
3
“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.
4
ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲೇ ಸರ್ವೇಶ್ವರ ಅವನಿಗೆ,
5
“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
6
ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.
7
ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.
8
ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.
9
ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.
10
ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ; ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು,” ಎಂದು ಹೇಳಿದನು.
11
ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.
12
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು.
13
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.
14
ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.
15
ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.
16
ಆಗ ಅವನು ಹಿಜ್ಕೀಯನಿಗೆ, “ಸರ್ವೇಶ್ವರನ ಮಾತನ್ನು ಕೇಳು:
17
‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.
18
ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.
19
‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.
20
ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
21
ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಮನಸ್ಸೆ ಅರಸನಾದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25