bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 22
2 Kings 22
Kannada Bible (KNCL) BSI 2016
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 23 →
1
ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.
2
ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
3
ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು,
4
“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.
5
ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.
7
ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.
8
ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.
9
ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು;
10
ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
11
ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,
12
ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,
13
“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
14
ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.
15
ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ;
16
‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.
17
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.
18
ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,
19
‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
20
ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25