bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Deuteronomy 19
Deuteronomy 19
Kannada Bible (KNCL) BSI 2016
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 20 →
1
“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.
2
ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
3
ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.
4
“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
5
ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
6
ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.
7
ಈ ಕಾರಣದಿಂದಲೇ ನೀವು ಆ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿ ಇದ್ದೇನೆ.
8
“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.
10
ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.
11
“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ
12
ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.
13
ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.
14
“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.
15
“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
16
“ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ,
17
ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.
18
ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,
19
ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
20
ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.
21
ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34