bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Deuteronomy 29
Deuteronomy 29
Kannada Bible (KNCL) BSI 2016
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 30 →
1
ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:
2
ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ
3
ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ.
4
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!
5
ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.
6
ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.
7
ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.
8
ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದವರಲ್ಲಿ ಅರ್ಧಜನರಿಗೂ ಸೊತ್ತಾಗಿ ಕೊಟ್ಟೆವಷ್ಟೆ.
9
ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.
10
“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,
11
ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,
12
ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.
14
“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.
16
ನಾವು ಈಜಿಪ್ಟ್ ದೇಶದಲ್ಲಿ ವಾಸಮಾಡಿದ್ದು, ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದು ನಿಮಗೆ ತಿಳಿದೇ ಇದೆ.
17
ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.
18
“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.
19
ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.
20
ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.
21
ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.
22
“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
23
ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.
24
‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.
25
ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
26
ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು.
27
ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;
28
ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.
29
“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 30 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34