bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Esther 8
Esther 8
Kannada Bible (KNCL) BSI 2016
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 9 →
1
ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.
2
ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು.
3
ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.
4
ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,
5
“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.
6
ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.
7
ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?
8
ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.
9
ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.
10
ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.
11
ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ
12
ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿ, ತಮ್ಮ ಪ್ರಾಣರಕ್ಷಣೆಗಾಗಿ ದಂಗೆಯೆದ್ದು, ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದುಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಮಕ್ಕಳು ಮಹಿಳೆಯರೆನ್ನದೆ ಎಲ್ಲರನ್ನೂ, ಕೊಂದು ಸಂಹರಿಸಿ,
13
ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’
14
ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.
15
ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.
16
ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.
17
ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 9 →
All chapters:
1
2
3
4
5
6
7
8
9
10