bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezekiel 18
Ezekiel 18
Kannada Bible (KNCL) BSI 2016
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 19 →
1
ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ:
2
“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್ ನಾಡನ್ನು ಕುರಿತು ಹೇಳುವುದೇಕೆ?
3
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
4
ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
5
“ಒಬ್ಬನು ಸದ್ಧರ್ಮಿಯಾಗಿ ನ್ಯಾಯನೀತಿಗಳನ್ನು ನಡೆಸಿ,
6
ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
7
ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;
8
ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
9
ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:
10
ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
11
ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ,
12
ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
13
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.
14
“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ
15
ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,
16
ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
17
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.
18
ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.
19
“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.
20
ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
21
“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.
22
ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.
23
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
24
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.
25
“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.
26
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.
27
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
28
ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.
29
ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
30
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.
31
ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?
32
ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48