bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezekiel 7
Ezekiel 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 8 →
1
ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:
2
“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’
3
“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.
4
ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”
5
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;
6
ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;
7
ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ, ಅದು ಬರೀ ಗೋಳೇ!
8
“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
9
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.
10
“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;
11
ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.
12
“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
13
ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;
14
ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.
15
“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.
16
ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.
17
ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
18
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.
19
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.
20
“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.
21
ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
22
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.
23
“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.
24
ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;
25
ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.
26
ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.
27
ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48