bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Genesis 15
Genesis 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 16 →
1
ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ\.
2
ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;
3
ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.
4
ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.
5
ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.
6
ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.
7
ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.
8
ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.
9
ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.
10
ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.
11
ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
12
ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.
13
ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.
14
ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.
15
ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.
16
ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.
17
ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.
18
ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”
19
ಅಂದರೆ. ಕೇನಿಯರು, ಕೆನಿಜೀಯರು, ಕದ್ಮೋನಿಯರು,
20
ಹಿತ್ತಿಯರು, ಪೆರಿಜೀಯರು, ರೆಫಾಯರು,
21
ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50