bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Haggai 1
Haggai 1
Kannada Bible (KNCL) BSI 2016
Jump to:
Chapter 1
Chapter 2
Chapter 2 →
1
ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.
2
ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”
3
ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೊಟ್ಟ ಸಂದೇಶವೇನೆಂದರೆ:
4
“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?
5
ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.
6
ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”
7
ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.
8
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.
9
ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.
10
ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.
11
ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”
12
ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.
13
ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.
14
ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.
15
ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.
Jump to:
Chapter 1
Chapter 2
Chapter 2 →
All chapters:
1
2