bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Isaiah 1
Isaiah 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 2 →
1
ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು:
2
ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.
3
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.
4
ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.
5
ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.
6
ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.
7
ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.
8
ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.
9
ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.
10
ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.
11
ಸ್ವಾಮಿ ಇಂತೆನ್ನುತ್ತಾರೆ: “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.
12
ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?
13
ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.
14
ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.
15
ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.
16
ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.
17
ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
18
ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.
19
ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.
20
ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”
21
ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!
22
ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ.
23
ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.
24
ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.
25
ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.
26
ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.
27
ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;
28
ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.
29
ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.
30
ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.
31
ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66