bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Jeremiah 21
Jeremiah 21
Kannada Bible (KNCL) BSI 2016
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 22 →
1
ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.
2
ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.
3
ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ:
4
ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.
5
ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.
6
ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು.
7
ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”
8
“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.
9
ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.
10
ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’
11
“ಜುದೇಯದ ಅರಸನ ಮನೆತನದ ವಿಷಯವಾಗಿ ಸರ್ವೇಶ್ವರ ಹೇಳಿರುವ ಈ ಮಾತನ್ನು ಗಮನಿಸಿರಿ:
12
‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.
13
ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.
14
ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52