bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Jeremiah 52
Jeremiah 52
Kannada Bible (KNCL) BSI 2016
← Chapter 51
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
1
ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.
2
ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದ.
3
ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.
4
ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.
5
ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದ.
6
ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.
7
ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
8
ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.
9
ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.
10
ಆ ಅರಸನು ಚಿದ್ಕೀಯನಿಗೆ ಶಿಕ್ಷೆ ವಿಧಿಸಿ ಅವನ ಮಕ್ಕಳನ್ನು ಅವನ ಕಣ್ಣೆದುರಿಗೆ ವಧಿಸಿದ. ಜುದೇಯದ ಎಲ್ಲ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದ.
11
ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.
12
ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.
13
ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
14
ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.
15
ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.
16
ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.
17
ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.
18
ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
19
ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.
20
ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.
21
ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು. ಅದರ ಸುತ್ತಳತೆ 5:3 ಮೀಟರ್. ಅದರ ಒಳಭಾಗ ಹೊಳ್ಳಾಗಿತ್ತು. ಆ ಲೋಹ ನಾಲ್ಕು ಬೆರಳು ದಪ್ಪವಾಗಿತ್ತು.
22
ಕಂಬದ ಮೇಲೆ 2:2 ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೆ ಅಲಂಕಾರವಾಗಿತ್ತು.
23
ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು
24
ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.
25
ಅವನು ನಗರದಿಂದ ಸೈನ್ಯಸಂಬಂಧವಾದ ಎಲ್ಲ ವ್ಯವಸ್ಥೆಯನ್ನೂ ಮಾಡುವ ಕಂಚುಕಿಯನ್ನು, ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡುಹೋದನು.
26
ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
27
ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.
28
ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,
29
ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಜೆರುಸಲೇಮಿನಿಂದ ಸೆರೆಗೊಯ್ದನು.
30
ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.
31
ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.
32
ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ಅವನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
33
ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.
34
ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗಿದ್ದ ಎಲ್ಲ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.
← Chapter 51
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52