bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
John 5
John 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 6 →
1
ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.
2
ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.
3
ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.
5
ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.
6
ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.
7
“ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.
8
ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು.
9
ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.
10
ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.
11
ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.
12
ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು.
13
ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.
14
ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.
15
ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.
16
ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.
17
ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.
18
ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.
19
ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.
20
ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.
21
ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.
22
ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.
23
ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.
24
“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.
25
ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.
26
ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.
27
ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.
28
ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.
29
ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.
30
“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.
31
“ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.
32
ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.
33
ನೀವೇ ಯೊವಾನ್ನನ ಬಳಿಗೆ ದೂತರನ್ನು ಕಳುಹಿಸಿದ್ದಿರಿ. ಆತನು ಸತ್ಯವನ್ನು ಕುರಿತು ಸಾಕ್ಷಿ ಹೇಳಿದ್ದಾನೆ.
34
ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.
35
ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.
36
ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.
37
ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.
38
ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.
39
ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.
40
ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.
41
“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.
42
ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.
43
ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.
44
ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.
45
ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.
46
ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.
47
ಆತನೇ ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?”
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21