bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Joshua 11
Joshua 11
Kannada Bible (KNCL) BSI 2016
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
1
ಹಾಚೋರಿನ ಅರಸ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮದೋನಿನ ಅರಸನಿಗೂ ಶಿಮ್ರೋನಿನ ಅರಸನಿಗೂ ಹಾಗು ಅಕ್ಷಾಫಿನ ಅರಸನಿಗೂ ಕರೆಕಳಿಸಿದನು.
2
ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ
3
ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.
4
ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
5
ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.
6
ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.
7
ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.
8
ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.
9
ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.
10
ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.
11
ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು.
12
ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.
13
ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ.
14
ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.
15
ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.
16
ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
17
ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.
18
ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.
19
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತು ಯಾವ ನಗರದವರೂ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
20
ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.
21
ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.
22
ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.
23
ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24