bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 2
Leviticus 2
Kannada Bible (KNCL) BSI 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 3 →
1
“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.
2
ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.
3
ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.
4
“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.
5
ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.
6
ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.
7
ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.
8
ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ.
9
ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.
10
ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.
11
“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.
12
ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.
13
ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.
14
“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.
15
ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು.
16
ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27