bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 23
Leviticus 23
Kannada Bible (KNCL) BSI 2016
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
1
ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು:
2
“ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:
3
ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.
4
ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.
5
“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.
6
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.
7
ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.
8
ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.
9
ಮೋಶೆಯ ಮುಖಾಂತರ ಇಸ್ರಯೇಲರಿಗೆ ಸರ್ವೇಶ್ವರ ಹೀಗೆ ಆಜ್ಞಾಪಿಸಿದರು:
10
“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.
11
ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು. ಆ ಸಿವುಡನ್ನು ನೈವೇದ್ಯವಾಗಿ ಆರತಿಯೆತ್ತುವ ದಿನದಂದೇ
12
ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
13
ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.
14
ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.
15
ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲುಗೊಂಡು, ಪೂರ್ಣವಾಗಿ ಏಳುವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು.
16
ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು.
17
ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
18
ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.
19
ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.
20
ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21
ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.
22
ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.
23
ಸರ್ವೇಶ್ವರ ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಹೇಳಿದರು:
24
ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.
25
ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.
26
ಸರ್ವೇಶ್ವರ ಮೋಶೆಗೆ ಹೇಳಿದ ಮಾತುಗಳಿವು:
27
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.
28
ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29
ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
30
ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.
31
ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.
32
ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.
33
ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ತಿಳಿಸಿದರು:
34
“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.
35
ಮೊದಲನೆಯ ದಿನ ದೇವಾರಾಧನೆಗಾಗಿ ಸಭೆ ಸೇರಬೇಕು; ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.
36
ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.
37
“ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು.
38
ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.
39
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.
40
ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.
41
ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.
42
ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು.
43
ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.”
44
ಹೀಗೆ ಮೋಶೆ ಸರ್ವೇಶ್ವರ ಸ್ವಾಮಿಯಿಂದ ನೇಮಕವಾದ ಹಬ್ಬಗಳ ವಿಷಯವಾಗಿ ಇಸ್ರಯೇಲರಿಗೆ ವಿವರಿಸಿದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27