bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 25
Leviticus 25
Kannada Bible (KNCL) BSI 2016
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 26 →
1
ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು:
2
“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.
3
ಆರು ವರ್ಷಗಳು ನೀವು ಹೊಲದಲ್ಲಿ ಬಿತ್ತನೆ ಮಾಡಬಹುದು. ದ್ರಾಕ್ಷಿತೋಟದ ಕೆಲಸವನ್ನು ಮಾಡಬಹುದು. ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
4
ಆದರೆ ಏಳನೆಯ ವರ್ಷ ಯಾವ ವ್ಯವಸಾಯವನ್ನೂ ಮಾಡಬಾರದು. ಅದು ವಿಶ್ರಾಂತಿಕಾಲವಾಗಿಯೂ ಸರ್ವೇಶ್ವರನ ಗೌರವಾರ್ಥ ಸಬ್ಬತ್ ಕಾಲವಾಗಿಯೂ ಇರಬೇಕು. ಆ ವರ್ಷ ಹೊಲದಲ್ಲಿ ವ್ಯವಸಾಯ ಮಾಡಬಾರದು; ದ್ರಾಕ್ಷೀ ತೋಟದ ಕೆಲಸವನ್ನೂ ಕೈಬಿಡಬೇಕು.
5
ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.
6
ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ
7
ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು.
8
“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ
9
ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.
10
ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.
11
ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.
12
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು.
13
ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.
14
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು.
15
ಕಳೆದ ಜೂಬಿಲಿ ವರ್ಷದಿಂದ ಇಷ್ಟು ವರ್ಷ ಆಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅಂತೆಯೇ ಮಾರುವವನು ಇಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
16
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ.
17
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.
18
“ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.
19
ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.
20
ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:
21
ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
22
ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.
23
“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.
24
ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.
25
ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.
26
ಬಿಡಿಸಬಲ್ಲ ನೆಂಟನು ಇಲ್ಲದೆಹೋದರೆ, ಮಾರಿದವನೇ ಮತ್ತೆ ಬಿಡಿಸಿಕೊಳ್ಳುವಷ್ಟು ಉತ್ತಮ ಸ್ಥಿತಿಗೆ ಬಂದರೆ,
27
ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು, ಉಳಿದ ಅವಧಿಗೆ ಕ್ರಯಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
28
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.
29
“ಯಾವನಾದರು ಕೋಟೆಯಿರುವ ಪಟ್ಟಣದ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನದಿಂದ ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು. ಒಂದು ವರ್ಷ ಪೂರ್ತಿ ಅದನ್ನು ಬಿಡಿಸುವ ಹಕ್ಕು ಅವನಿಗಿರುವುದು.
30
ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು.
31
ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.
32
ಆದರೆ ಲೇವಿಯರ ಸೊತ್ತಾಗಿರುವ ಪೇಟೆಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಲೇವಿಯರಿಗೆ ಯಾವಾಗಲು ಇರುವುದು.
33
ಲೇವಿಯರಲ್ಲಿ ಯಾರೂ ಅದನ್ನು ಬಿಡಿಸದೆ ಹೋದರೆ ಲೇವಿಯರ ಸೊತ್ತಾದ ಅಂಥ ಪೇಟೆಮನೆ ಮಾರಾಟವಾಗಿದ್ದರೂ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಏಕೆಂದರೆ ಇಸ್ರಯೇಲರ ಮಧ್ಯೆಯಿರುವ ಲೇವಿಯರ ಪೇಟೆಮನೆಗಳು ಅವರ ಶಾಶ್ವತ ಸೊತ್ತು.
34
ಅವರು ತಮ್ಮ ಪೇಟೆಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅದು ಅವರಿಗೆ ಶಾಶ್ವತವಾದ ಸೊತ್ತು.
35
“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.
36
ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.
37
ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬೇಡಿ, ದವಸಧಾನ್ಯ ಕೊಟ್ಟರೆ ಲಾಭ ಕೇಳಬೇಡಿ.
38
ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.
39
ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.
40
ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.
41
ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು.
42
ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.
43
ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.
44
ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು;
45
ನಿಮ್ಮ ನಡುವೆ ಇರುವ ಪರವಾಸಿಗಳನ್ನೂ ನಿಮ್ಮ ನಾಡಿನಲ್ಲೇ ಅವರಿಂದ ಹುಟ್ಟಿದವರನ್ನೂ ಕೊಂಡುಕೊಳ್ಳಬಹುದು. ಅಂಥವರು ನಿಮಗೆ ಸೊತ್ತಾಗಬಹುದು.
46
ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸೊತ್ತಾಗಿ ಕೊಟ್ಟುಬಿಡಬಹುದು. ಅವರನ್ನು ಶಾಶ್ವತ ಜೀತದಾರರನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಸ್ರಯೇಲರಾದ ನೀವೆಲ್ಲರು ಸಹೋದರರು. ಆದುದರಿಂದ ಒಬ್ಬರಿಂದೊಬ್ಬರು ಕ್ರೂರವಾಗಿ ಸೇವೆ ಮಾಡಿಸಿಕೊಳ್ಳಬಾರದು.
47
ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
48
ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
49
ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
50
ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದೆ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿ ಲೆಕ್ಕಿಸಬೇಕು.
51
ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಹೆಚ್ಚು ಭಾಗವನ್ನೂ
52
ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪ ಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
53
ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
54
ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.
55
ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27