bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 26
Leviticus 26
Kannada Bible (KNCL) BSI 2016
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
1
“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.
2
ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು. ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.
3
“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ
4
ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.
5
ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.
6
ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.
7
ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ.
8
ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
9
ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
10
ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.
11
ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.
12
ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.
13
ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?
14
“ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
15
ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ
16
ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.
17
ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.
18
“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.
19
ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.
20
ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.
21
“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.
22
ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.
23
“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ತಲೆಬಾಗದೆ ನನಗೆ ವಿರೋಧವಾಗಿ ನಡೆದರೆ
24
ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.
25
ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.
26
ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.
27
“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ,
28
ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.
29
ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
30
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.
31
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.
32
ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.
33
ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.
34
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.
35
ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು.
36
“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.
37
ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.
38
ಅನ್ಯಜನಗಳಲ್ಲಿ ಚದರಿಹೋಗಿ ಕಣ್ಮರೆಯಾಗುವಿರಿ. ಶತ್ರುಗಳ ದೇಶ ನಿಮ್ಮನ್ನು ಕಬಳಿಸಿಬಿಡುವುದು.
39
ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.
40
“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ
41
ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,
42
ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.
43
ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.
44
ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?
45
ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”
46
ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27