bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 5
Leviticus 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 6 →
1
“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
2
“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.
3
“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.
4
“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.
5
“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
6
ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
7
“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.
8
ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.
9
ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.
10
ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.
11
“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.
12
ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.
13
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”
14
ಮೋಶೆಗೆ ಸರ್ವೇಶ್ವರ ಹೀಗೆಂದರು:
15
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.
16
ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.
17
“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.
18
ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.
19
ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27