bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 12
Luke 12
Kannada Bible (KNCL) BSI 2016
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
1
ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.
2
ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.
3
ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.
4
“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
5
ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.
6
“ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.
7
ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
8
“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
9
ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.
10
“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.
11
“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.
12
ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.
13
ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.
14
ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.
15
ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.
16
ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.
17
ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,
18
‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.
19
ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ\,’ ಎಂದುಕೊಂಡ.
20
ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.
21
“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.
22
ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.
23
ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.
24
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!
25
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
26
ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?
27
ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
28
ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!
29
ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.
30
ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
31
ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.
32
“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.
33
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.
34
ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.
35
“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.
36
ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.
37
ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
38
“ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.
39
ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.
40
ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.
41
ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.
42
ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.
43
ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.
44
ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
45
“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ
46
ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.
47
“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.
48
ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.
49
“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.
50
ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.
51
ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
52
ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.
53
ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.
54
ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.
55
ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.
56
ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?
57
“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?
58
ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.
59
ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24