bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 5
Luke 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 6 →
1
ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.
2
ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3
ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.
4
ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು.
5
ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.
6
ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.
7
ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.
8
ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.
9
ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.
10
ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.
11
ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.
12
ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.
13
ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.
14
ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.
15
ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.
16
ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.
17
ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.
18
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.
19
ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
20
ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
21
ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.
22
ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?
23
‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?
24
ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.
25
ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು.
26
ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.
27
ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು.
28
ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು.
29
ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.
30
ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.
31
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ;
32
ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.
33
“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.
34
ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ?
35
ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.
36
ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.
37
ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.
38
ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.
39
ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24