bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Mark 15
Mark 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 16 →
1
ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.
2
ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.
3
ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.
4
ಆದುದರಿಂದ ಪಿಲಾತನು ಪುನಃ ಯೇಸುವನ್ನು, “ಇವರು ಇಷ್ಟೊಂದು ಆಪಾದನೆಗಳನ್ನು ನಿನ್ನ ಮೇಲೆ ಹೊರಿಸುತ್ತಿರುವಾಗ ನೀನು ಯಾವ ಉತ್ತರವನ್ನೂ ಕೊಡುವುದಿಲ್ಲವೆ?” ಎಂದು ಕೇಳಿದನು.
5
ಆದರೆ ಯೇಸು ಇನ್ನೊಂದು ಮಾತನ್ನೂ ಆಡದೆ ಮೌನವಾಗಿದ್ದರು. ಇದನ್ನು ಕಂಡು ಪಿಲಾತನು ಆಶ್ಚರ್ಯಪಟ್ಟನು.
6
ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು.
7
ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.
8
ಜನರ ಗುಂಪು ಪಿಲಾತನ ಬಳಿಗೆ ಹೋಗಿ, ಪದ್ಧತಿಯಂತೆ ಈ ವರ್ಷವೂ ಒಬ್ಬ ಕೈದಿಯನ್ನು ತಮಗೆ ಬಿಟ್ಟುಕೊಡಬೇಕೆಂದು ಕೇಳಿದಾಗ ಪಿಲಾತನು,
9
“ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?\ ಎಂದು ಅವರನ್ನು ಕೇಳಿದನು.
10
ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.
11
ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.
12
ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.
13
ಅದಕ್ಕೆ ಅವರು, “ಅವನನ್ನು ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು.
14
“ಏಕೆ ಇವನೇನು ಮಾಡಿದ್ದಾನೆ?” ಎಂದು ಪಿಲಾತನು ಮತ್ತೆ ಅವರನ್ನು ಪ್ರಶ್ನಿಸಲು ಅವರು, “ಅವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.
15
ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.
16
ಅನಂತರ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಅಂಗಣದೊಳಕ್ಕೆ ಕೊಂಡೊಯ್ದು, ತಮ್ಮ ಪಡೆಯೆಲ್ಲವನ್ನೂ ಒಟ್ಟಿಗೆ ಕರೆದರು.
17
ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.
18
ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.
19
ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.
20
ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.
21
ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.
22
ಬಳಿಕ ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ.
23
ಅಲ್ಲಿ ರಕ್ತಬೋಳ ಮಿಶ್ರಿತ ದ್ರಾಕ್ಷಾರಸವನ್ನು ಯೇಸುವಿಗೆ ಕೊಟ್ಟರು. ಆದರೆ ಅದನ್ನು ಅವರು ಕುಡಿಯಲಿಲ್ಲ.
24
ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.
25
ಯೇಸುವನ್ನು ಶಿಲುಬೆಗೇರಿಸಿದಾಗ, ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯಾಗಿತ್ತು.
26
ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.
27
ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.
28
(ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು).
29
ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,
30
ಶಿಲುಬೆಯಿಂದ ಇಳಿದುಬಂದು ನಿನ್ನನ್ನು ನೀನೇ ಈಗ ರಕ್ಷಿಸಿಕೋ!” ಎಂದು ಯೇಸುವನ್ನು ಮೂದಲಿಸಿದರು.
31
ಅದೇ ಪ್ರಕಾರ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸೇರಿ ಅವರನ್ನು ಅಪಹಾಸ್ಯಮಾಡುತ್ತಾ, “ಇವನು ಇತರರನ್ನು ರಕ್ಷಿಸಿದ, ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು;
32
ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.
33
ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.
34
ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
35
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇಗೋ, ಇವನು ಎಲೀಯನನ್ನು ಕರೆಯುತ್ತಿದ್ದಾನೆ!” ಎಂದರು.
36
ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು.
37
ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
38
ಆಗ ಮಹಾದೇವಾಲಯದ ತೆರೆ ಮೇಲಿನಿಂದ ಕೆಳಗಿನವರೆಗೂ ಇಬ್ಭಾಗವಾಗಿ ಸೀಳಿಹೋಯಿತು.
39
ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.
40
ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.
41
ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು.
42
ಅಷ್ಟರಲ್ಲೇ ಸಂಜೆಯಾಗಿತ್ತು. ಸಬ್ಬತ್ತಿನ ಹಿಂದಿನ ದಿನವಾಗಿದ್ದ ಅಂದು ‘ಸಿದ್ಧತೆ’ಯ ದಿನ ಆಗಿತ್ತು. ಆದುದರಿಂದ ಅರಿಮತಾಯ ಊರಿನ ಜೋಸೆಫ್ ಎಂಬಾತನು ಧೈರ್ಯತಂದುಕೊಂಡು, ಪಿಲಾತನ ಸಾನ್ನಿಧ್ಯಕ್ಕೆ ಹೋಗಿ, ಯೇಸುಸ್ವಾಮಿಯ ಪಾರ್ಥಿವ ಶರೀರವನ್ನು
43
ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.
44
ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.
45
ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.
46
ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.
47
ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 16 →
All chapters:
1
2
3
4
5
6
7
8
9
10
11
12
13
14
15
16