bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Matthew 2
Matthew 2
Kannada Bible (KNCL) BSI 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 3 →
1
ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.
2
“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.
3
ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.
4
ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.
5
ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ:
6
‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.
7
ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.
8
ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.
9
ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.
10
ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು.
11
ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.
12
ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.
13
ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.
14
ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.
15
ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.
16
ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.
17
“ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,”
18
ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.
19
ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,
20
“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.
21
ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.
22
ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.
23
ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28