bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Numbers 27
Numbers 27
Kannada Bible (KNCL) BSI 2016
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 28 →
1
ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.
2
ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:
3
“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.
4
ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರಕ್ಕೆ ಅವರ ಹೆಸರನ್ನು ಕುಲದಿಂದ ತೆಗೆದುಹಾಕುವುದು ನ್ಯಾಯವೇ? ನಮ್ಮ ತಂದೆಯ ಸ್ವಂತದವರಲ್ಲಿ ನಮಗೂ ಸೊತ್ತನ್ನು ಕೊಡಿ,” ಎಂದು ಕೇಳಿಕೊಂಡರು.
5
ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:
6
“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ.
7
ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.
8
ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.
9
ಮಗಳು ಇಲ್ಲದ ಪಕ್ಷಕ್ಕೆ ಅವನ ಸೊತ್ತು ಅವನ ಅಣ್ಣತಮ್ಮಂದಿರಿಗೆ ಸೇರಬೇಕು.
10
ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ತಂದೆಯ ಅಣ್ಣತಮ್ಮಂದಿರಿಗೆ ಸೇರಬೇಕು.
11
ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”
12
ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು.
13
ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.
14
ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.
15
ಆಗ ಮೋಶೆ ಸರ್ವೇಶ್ವರನಿಗೆ:
16
“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.
17
ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.
18
ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.
19
ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.
20
ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.
21
ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.
22
ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ
23
ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 28 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36