bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 1
Proverbs 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 2 →
1
ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:
2
ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,
3
ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು
4
ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.
5
ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.
6
ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.
7
ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.
8
ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.
9
ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.
10
ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.
11
ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;
12
ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;
13
ಅಮೂಲ್ಯವಾದ ಸೊತ್ತನ್ನೆಲ್ಲಾ ಕಂಡುಹಿಡಿಯೋಣ; ಕೊಳ್ಳೆಹೊಡೆದು ಮನೆ ತುಂಬಿಸಿಕೊಳ್ಳೋಣ, ಬಾ;
14
ನಮ್ಮೊಡನೆ ಪಾಲುಗಾರನಾಗಲು ಬಾ; ನಮ್ಮೆಲ್ಲರ ನಿಧಿ ಒಂದೇ ಆಗಿರಲಿ” ಎಂದೆಲ್ಲಾ ಹೇಳುವರು.
15
ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.
16
ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.
17
ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?
18
ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.
19
ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.
20
ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;
21
ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ:
22
“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?
23
ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.
24
ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.
25
ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.
26
ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,
27
ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು.
28
ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.
29
ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.
30
ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.
31
ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.
32
ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.
33
ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31