bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 10
Proverbs 10
Kannada Bible (KNCL) BSI 2016
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
1
ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.
2
ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.
3
ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.
4
ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.
5
ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ.
6
ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.
7
ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.
8
ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.
9
ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.
10
ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.
11
ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.
12
ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.
13
ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.
14
ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.
15
ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.
16
ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.
17
ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.
18
ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.
19
ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.
20
ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.
21
ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.
22
ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.
23
ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.
24
ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.
25
ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.
26
ಹಲ್ಲಿಗೆ ಹುಳಿ ಹೇಗೋ, ಕಣ್ಣಿಗೆ ಹೊಗೆ ಹೇಗೋ; ಯಜಮಾನನಿಗೆ ಮೈಗಳ್ಳನು ಹಾಗೆ.
27
ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.
28
ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.
29
ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.
30
ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.
31
ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.
32
ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31